15
ಯೆಹೋವನ ಸನ್ನಿಧಿಗೆ ಬರಲು ಯೋಗ್ಯರಾದವರು
ದಾವೀದನ ಕೀರ್ತನೆ.
ಯೆಹೋವನೇ, ನಿನ್ನ ಗುಡಾರದಲ್ಲಿ ಇಳಿದುಕೊಂಡಿರುವುದಕ್ಕೆ ಯಾರು ಯೋಗ್ಯರು?
ನಿನ್ನ ಪರಿಶುದ್ಧಪರ್ವತದಲ್ಲಿ ವಾಸಿಸತಕ್ಕವನು ಎಂಥವನಾಗಿರಬೇಕು?
ಅವನು ಸಜ್ಜನನೂ, ನೀತಿವಂತನೂ,
ಮನಃಪೂರ್ವಕವಾಗಿ ಸತ್ಯದ ಮಾತುಗಳನ್ನಾಡುವವನೂ ಆಗಿರಬೇಕು.
ಅವನು ಚಾಡಿಯನ್ನು ಹೇಳದವನೂ,
ಮತ್ತೊಬ್ಬರಿಗೆ ಅನ್ಯಾಯ ಮಾಡದವನೂ,
ಯಾರನ್ನೂ ನಿಂದಿಸದವನೂ ಆಗಿರಬೇಕು.
ಅವನು ಭ್ರಷ್ಟರನ್ನು ಬಿಟ್ಟುಬಿಟ್ಟವನೂ,
ಯೆಹೋವನಲ್ಲಿ ಭಯಭಕ್ತಿಯುಳ್ಳವರನ್ನು ಸನ್ಮಾನಿಸುವವನೂ,
ನಷ್ಟವಾದರೂ ಪ್ರಮಾಣತಪ್ಪದವನೂ ಆಗಿರಬೇಕು.
ಅವನು ಸಾಲಕ್ಕೆ ಬಡ್ಡಿ ಕೇಳದವನೂ,
ನಿರಪರಾಧಿಯ ಕೇಡಿಗಾಗಿ ಲಂಚವನ್ನು ತೆಗೆದುಕೊಳ್ಳದವನೂ ಆಗಿರಬೇಕು.
ಇಂಥವನು ಎಂದಿಗೂ ಕದಲುವುದಿಲ್ಲ.